top of page


ವಾಣಿಜ್ಯ LPG ಸಿಲಿಂಡರ್ ಬೆಲೆ ತಕ್ಷಣ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಹೋಟೆಲ್ ಸಂಘ ಮನವಿ
ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕೆಎಸ್ಎಚ್ಎ ಅಧ್ಯಕ್ಷ ಜಿ.ಕೆ. ಶೆಟ್ಟಿ, ಫೆಬ


ಮಹಿಳಾ ಟಿ-20 ವಿಶ್ವಕಪ್ ನಿಂದ ಭಾರತ ತಂಡ ನಿರ್ಗಮನ: ಹರ್ಮನ್ಪ್ರೀತ್ ಕೌರ್ ಬಿಗ್ ಸ್ಟೇಟ್ಮೆಂಟ್!
ಆಸ್ಟ್ರೇಲಿಯಾದ ಬೌಲರ್ಗಳು ಯೋಜನಾಬದ್ಧ ಅತ್ಯುತ್ತಮ ಬೌಲಿಂಗ್ ಮಾಡಿದರು. ನಾವು ಹೆಚ್ಚು ವಿಕೆಟ್ಗಳನ್ನು ಕಳೆದುಕೊಳ್ಳಲಿಲ್ಲ, ಆದರೆ ಅವರನ್ನುಒತ್ತಡಕ್ಕೆ ಒಳಪಡಿಸುವಷ್ಟು ಸ್ಕೋರ್ ಮಾಡುವಲ್ಲಿ ಸಾಧ್ಯವಾಗಲಿಲ್ಲ ಎಂದು ಹರ್ಮನ್ ಪ್ರೀತ್ ಕೌರ್ ಹೇಳಿದರು. ಲಂಡನ್: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಭಾರತ ತಂಡ ನಿರ್ಗಮಿಸಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗ್ರೂಪ್-1ರ ಕೊನೆಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಆರು ವಿಕೆಟ್ ಗಳಿಂದ ಮಣಿಸಿ, ಸೆಮಿಫೈನಲ್ ಪ್ರವೇಶಿಸಿತು. ಪಂದ್ಯದ ನಂತರ ಮಾತನಾಡಿದ ಹರ್ಮನ್ಪ್ರೀತ್, ನಿರೀಕ್ಷಿಸಿದ ಸ್ಕೋರ್ ತಲುಪುವಲ್ಲಿ ಭಾರತ


2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ. ಶಿವಕುಮಾರ್
ಜೂನ್ 30ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಪರಿಶೀಲಿಸಿಕೊಳ್ಳಬೇಕು. ಬೆಂಗಳೂರು: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, 2029ರ ಲೋಕಸಭೆ ಚುನಾವಣೆಯ ಬಳಿಕ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾರ್ಮಿಕರ ಕಾಂಗ್ರೆಸ್ (INTUC) 316ನೇ ಅಖಿಲ ಭಾರತ ಕಾರ್ಯಕಾರಿ


ಸೆಶೆಲ್ಸ್ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ
ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿವೆ. ನವದೆಹಲಿ: ಭಾರತದ ದೃಷ್ಟಿಯಲ್ಲಿ ಹಿಂದೂ ಮಹಾಸಾಗರವು ಅವಕಾಶಗಳ ಸಾಗರವಾಗಿದ್ದು, ಸಾಗರ ಭದ್ರತೆ ಮತ್ತು ಆರ್ಥಿಕ ಸಮೃದ್ಧಿ ಪರಸ್ಪರ ಪೂರಕವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು. ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್


ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ.ಹರಿಪ್ರಸಾದ್ ವಾಗ್ದಾಳಿ
ಪ್ರಹ್ಲಾದ್ ಜೋಶಿಯವರಿಗೆ ಧೈರ್ಯವಿದ್ದರೆ, ನಿಜವಾದ ಹಿಂದೂ ಆಗಿದ್ದರೆ, ರಾಮ ಮಂದಿರದ ದೇಣಿಗೆ ಹಣವನ್ನು ಯಾರು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ಗೆ ಉದ್ಯಮಿ ಮುಕೇಶ್ ಅಂಬಾನಿ ನೀಡಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ಲೆಕ್ಕ ಬಹಿರಂಗವಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ


ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಭೂಕಂಪದಿಂದ ಉಂಟಾದ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಅಮೆರಿಕ ಸರ್ಕಾರ ವೆನೆಜುವೆಲಾಗೆ ಪರಿಹಾರ ಸಾಮಗ್ರಿ ಮತ್ತು ಮಾನವೀಯ ನೆರವು ತಲುಪಿಸಲು ಕೆಲವು ಆರ್ಥಿಕ ನಿರ್ಬಂಧಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದೆ. ಕೇವಲ ಒಂದು ನಿಮಿಷದ ಅಂತರದಲ್ಲಿ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ವೆನೆಜುವೆಲಾದಲ್ಲಿ ಭಾರೀ ವಿನಾಶ ಸೃಷ್ಟಿಸಿವೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು, ಈ ವರಗೂ 235 ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಆರೋಗ್ಯ ಸಚಿವ ಕಾರ್ಲೋಸ್ ಅಲ್ವಾರಾಡೊ ಅವರು ಸರ್ಕ


Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!
ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಮ್ಯಾಂಚೆಸ್ಟರ್: ಮಹಿಳಾ ಟಿ-20 ವಿಶ್ವಕಪ್ ಪಂದ್ಯಾವಳಿಯ 23ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಬಾಂಗ್ಲಾದೇಶದ ಪರ ಜುಯಿರಿಯಾ ಫರ್ಡಸ್ 3


ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (ಸಿಎಜಿ) ವರದಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ" ಎಂದು ಆರೋಪಿಸಿರುವ ಬಿಜೆಪಿ, ಯೋಜನೆಯ ಅನುಷ್ಠಾನದಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ (X) ಪೋಸ್ಟ್ ಮಾಡಿರುವ ಬಿಜೆ


Ketan Agarwal Murder ಪ್ರಕರಣಕ್ಕೆ ಹೊಸ ಟ್ವಿಸ್ಟ್; 'ಮದುವೆ ಬೇಡ ಎಂದರೂ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ'; ವಿಚಾರಣೆ ವೇಳೆ ಸಿಯಾ ಗೋಯಲ್ ಹೇಳಿಕೆ
ಇದೂವರೆಗಿನ ತನಿಖೆಯಲ್ಲಿ ಕೊಲೆಯ ಸಂಪೂರ್ಣ ಸಂಚನ್ನು ರೂಪಿಸಿದ್ದು ಸಿಯಾ ಗೋಯಲ್ ಎಂಬುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ಮದುವೆಯನ್ನು ರದ್ದುಗೊಳಿಸಲು ಕೇತನ್ ಒಪ್ಪದಿದ್ದಾಗ ಅವರನ್ನು ಕೊಲೆ ಮಾಡುವ ಯೋಜನೆಯನ್ನು ಚೇತನ್ ರೂಪಿಸಿದ್ದಾನೆ. ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಪ್ರಮುಖ ಆರೋಪಿ ಸಿಯಾ ಗೋಯಲ್ ವಿಚಾರಣೆ ವೇಳೆ, "ನನಗೆ ಈ ಮದುವೆ ಬೇಡ ಎಂದು ಕೇತನ್ಗೆ ಹೇಳಿದ್ದೆ. ಆದರೆ, ಆತ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ" ಎಂದು ಹೇಳಿಕೆ ನೀಡಿರು


ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!
ಶಿಕ್ಷಣವು ಶಾಶ್ವತ ಶಾಂತಿ ನಿರ್ಮಾಣದ ಪ್ರಮುಖ ಅಡಿಪಾಯವಾಗಿದ್ದು, ಮಕ್ಕಳಿಗೆ ಕಲಿಯುವ, ಬೆಳೆಯುವ ಮತ್ತು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಸಾಧಿಸುವ ಅವಕಾಶವನ್ನು ಯಾವುದೇ ಸಂದರ್ಭದಲ್ಲೂ ಕಸಿದುಕೊಳ್ಳಬಾರದು. ನ್ಯೂಯಾರ್ಕ್: ಸಶಸ್ತ್ರ ಸಂಘರ್ಷಗಳಿಂದ ಬಾಧಿತವಾಗಿರುವ ಪ್ರದೇಶಗಳಲ್ಲಿ ಶಾಲೆಗಳು ಮತ್ತು ಮಕ್ಕಳನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳಿಗೆ ಅಂತ್ಯ ಹಾಡಲು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಒತ್ತಾಯಿಸಿದೆ. ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವುದಷ್ಟೇ ಸಾಕಾಗುವುದಿಲ್ಲ, ಅವರ ಮೇಲೆ ದಾಳಿ ನಡೆಸುವವರನ್ನು ಹೊಣೆಗಾರರನ್ನಾಗಿ


ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!
ಸೆನ್ಸೆಕ್ಸ್ ಇಂದು ಬರೊಬ್ಬರಿ 790.54 ಅಂಕಗಳ ಏರಿಕೆಯೊಂದಿಗೆ 76,991.22 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 197.55 ಅಂಕಗಳ ಏರಿಕೆಯೊಂದಿಗೆ 24,021.65 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ: ಮಂಗಳವಾರ ಭಾರಿ ಕುಸಿತಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.04ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.83ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 790


ಭಾರತ- ಇಂಗ್ಲೆಂಡ್ ಸರಣಿ: ಎಲ್ಲಾ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳಲ್ಲ ವೈಭವ್ ಸೂರ್ಯವಂಶಿ! ಕಾರಣವೇನು ಗೊತ್ತಾ?
ಇಂಗ್ಲೆಂಡ್ನಲ್ಲಿ ವೈಭವ್ ಸೂರ್ಯವಂಶಿ ಆಡುವುದು ಖಚಿತವಾಗಿದೆ. ಇನ್ನು ಮತ್ತೊಂದು ಕಾರಣಕ್ಕಾಗಿ ವೈಭವ್ ಸೂರ್ಯವಂಶಿ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಜೂನ್ 26 ರಿಂದ ಆರಂಭವಾಗಲಿರುವ ಭಾರತ ಹಾಗೂ ಐರ್ಲೆಂಡ್ ನಡುವೆ ಎರಡು ಪಂದ್ಯಗಳ ಟಿ20 ಸರಣಿ ಮುಕ್ತಾಯಗೊಳ್ಳುತ್ತಿದ್ದಂತೆಯೇ, ಭಾರತ- ಇಂಗ್ಲೆಂಡ್ ಟಿ20 ಸರಣಿ ಆರಂಭವಾಗಲಿದೆ. ಇಂಗ್ಲೆಂಡ್ ನಲ್ಲಿ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಎರಡೂ ಪ್ರವಾಸಗಳಿಗೂ ಟೀಂ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ನಲ್ಲಿ ವೈಭವ್ ಸೂರ್ಯವಂಶಿ ಆಡುವುದು ಖಚಿತವಾಗಿದೆ. ಇನ್ನು ಮತ್ತೊಂ


ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಕಾಂಕ್ಷಿಯಾಗಿರುವ 60 ಕ್ಕೂ ಹೆಚ್ಚು ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಸಿಎಂ ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇವೆ. ಜೂನ್ 3 ರಂದು ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ 13 ಶಾಸ


ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!
ತುರ್ತು ಪರಿಸ್ಥಿತಿ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಆ ಸಂದರ್ಭದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಳಿಸಲು ಹೋರಾಡಿದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ.ನವದೆಹಲಿ: 1975ರಲ್ಲಿ ದೇಶದಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ (Emergency) ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ಜೂನ್ 25ರ ದೇಶದ ಕರಾಳ ಇತಿಹಾಸದ ನೆನಪಿಗಾಗಿ ಆಚರಿಸಲಾಗುತ್ತಿರುವ 'ಸಂವಿಧಾನ ಹತ್ಯಾ ದಿವಸ್' ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು


ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!
ಅಮೆರಿಕದ ಜನತೆಗೆ ಸರ್ಕಾರ ಹೇಳುತ್ತಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಯುದ್ಧವು ಮೂಲ ಯೋಜನೆಯಂತೆ ಸಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧ ಹಾಗೂ ಅದರ ಹೆಚ್ಚುತ್ತಿರುವ ವೆಚ್ಚದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ ಎದುರಾಗುತ್ತಿದೆ. ಇರಾನ್ ಸಂಘರ್ಷಕ್ಕೆ ಹೆಚ್ಚುವರಿಯಾಗಿ 70 ಬಿಲಿಯನ್ ಡಾಲರ್ ತುರ್ತು ನಿಧಿ ಮಂಜೂರು ಮಾಡುವಂತೆ ಟ್ರಂಪ್ ಆಡಳಿತ ಕಾಂಗ್ರೆಸ್ಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ರಿಪಬ್ಲಿಕನ್ ಪಕ್ಷದೊಳಗಿನ ಭಿನ್ನಮತ ಸ್ಫೋಟಗೊಂಡಿದೆ. ಬುಧವಾರ ನಡೆದ ರಿಪಬ


ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ: ವೈಫಲ್ಯಗಳ ಮುಚ್ಚಿ ಹಾಕುವ ತಂತ್ರವಷ್ಟೇ; ಯುದ್ಧದ ಬೆದರಿಕೆ ಕೊಟ್ಟ ಪಾಕಿಸ್ತಾನಕ್ಕೆ ಭಾರತ ತಿರುಗೇಟು
ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆಯಾದರೆ ಯುದ್ಧವನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದರು. ನವದೆಹಲಿ: ಸಿಂಧು ಜಲ ಒಪ್ಪಂದ (Indus Waters Treaty) ಅಮಾನತು ವಿಚಾರವಾಗಿ ಯುದ್ಧದ ಬೆದರಿಕೆ ಹಾಕಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳು ಪಾಕಿಸ್ತಾನದ ವೈಫಲ್ಯಗಳನ್ನು ಮುಚ್ಚಿಹಾಕುವ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಜಗತ್ತಿನ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಎಂದು ಭಾರತ ಟೀಕಿಸಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್


ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video
ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿ: ಭಾರತೀಯ ಕ್ರಿಕೆಟಿನಲ್ಲಿ ಮರೆಯಲಾಗದಂತಹ ಅದ್ಬುತ ಪ್ರದರ್ಶನ, ದಾಖಲೆಗಳು ಮತ್ತು ಟ್ರೋಫಿಗಳೊಂದಿಗೆ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿರುವ ಮಾಜಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟೀಂ ಇಂಡಿಯಾದ ಯಶಸ್ವಿ


ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!
34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿತ್ತು. ಬೆಂಗಳೂರು: ಸಚಿವಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯು ಜುಲೈಗೆ ಮುಂದೂಡಲಾಗುತ್ತಿದೆ. ಹಲವು ಶಾಸಕರು ಸರ್ಕಾರಕ್ಕೆ ಸೇರಲು ಭಾರಿ ಒತ್ತಡವನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ಮುಂದೂಡಬಹುದು ಎಂದು ಹೇಳಲಾಗುತ್ತಿದೆ. 34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವ


ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!
ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ. ನವದೆಹಲಿ: ಶಿಕ್ಷಣ ತಜ್ಞ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮ


ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ಲೋಕಸಭೆಯ ವ

