top of page


Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ
ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ. ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ದೇಶದಲ್ಲಿ ಕೇವಲ ಇನ್ನೈದು ವರ್ಷಗಳಲ್ಲಿ Blue-Collar ಕಾರ್ಮಿಕರ ಗಂಭೀರ ಕೊರತೆ ಎದುರಾಗಲಿದ್ದು, ಪ್ಲಂಬರ್ಗಳು, ಎಲೆಕ್ಟ್ರಿಷಿಯನ್ ಗಳಂತಹ ಬ್ಲೂಕಾಲರ್ ಉದ್ಯೋಗಿಗಳ ಕೊರತೆ ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ (Ritesh Jain


'ಹಾಲಿವುಡ್, ಬಾಲಿವುಡ್ ತಾರೆಯರಿಗಿಂತಲೂ 15 ವರ್ಷದ ವೈಭವ್ ಸೂರ್ಯವಂಶಿ ದೊಡ್ಡವರು': ಲಲಿತ್ ಮೋದಿ
ಸೂರ್ಯವಂಶಿ ಟಿ20 ಕ್ರಿಕೆಟ್ನಲ್ಲಿ ದ್ವಿಶತಕ ಗಳಿಸಬೇಕು. ಬಿಹಾರ ಮೂಲದ ಬ್ಯಾಟ್ಸ್ಮನ್ ಯಾವುದೇ ಚಲನಚಿತ್ರ ತಾರೆಗಿಂತ ದೊಡ್ಡ ಸೆಲೆಬ್ರಿಟಿಯಾಗಬಹುದು ಎಂದು ಅವರು ಹೇಳಿದ್ದಾರೆ. ಐಪಿಎಲ್ 2025ರಲ್ಲಿ ಆರಂಭವಾದ 15 ವರ್ಷದ ವಂಡರ್ ಕಿಡ್ ವೈಭವ್ ಸೂರ್ಯವಂಶಿ ಕುರಿತ ಚರ್ಚೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈ ಬ್ಯಾಟಿಂಗ್ ಸೆನ್ಸೇಶನ್, ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ (RR) ಪರ ಹಲವಾರು ಅಭೂತಪೂರ್ವ ಇನಿಂಗ್ಸ್ಗಳನ್ನು ಆಡಿ ಬಹುತೇಕ ಎಲ್ಲ ಆಟಗಾರರನ್ನು ಹಿಂದಿಕ್ಕಿದರು. 16 ಪಂದ್ಯಗಳಲ್ಲಿ 776 ರನ್ಗಳೊಂದಿಗೆ, ಸೂರ್ಯವಂಶಿ ಪಂದ್ಯಾವಳಿಯ ಪ್ರಮುಖ ರನ್ ಸ್ಕೋರರ್ ಆದರು ಮತ್ತು


KPCC ಪಟ್ಟಕ್ಕೆ ಭಾರೀ ಪೈಪೋಟಿ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ, 21 ಸ್ವಾಮೀಜಿಗಳಿಂದ ಬೆಂಬಲದ ಸಂದೇಶ..!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿ/ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಹೊಸ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರನ್ನು 21 ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ. ಈ ಭೇಟಿಯಲ್ಲಿ ಹಿಂದುಳಿದ ವರ್ಗಗಳು, ದಲಿತರು ಹಾಗೂ ಆದಿವಾಸಿ ಸಮುದಾಯಗಳಿಗೆ ಪಕ್ಷ ಸಂಘಟನೆ ಮತ್ತು ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಷಯ ಕುರಿತು ಚರ್ಚೆಯಾಗ


JOB Alert: DCC ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಸಲ್ಲಿಸಿ
ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಬಳ್ಳಾರಿ ಡಿಸಿಸಿ ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ ಇದ್ದು ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು, ಕಿರಿಯ ಸೇವಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ: ವ್ಯವಸ್ಥಾಪಕರು/


ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 12 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ 10 ರಿಂದ 12 ಮಂದಿ ಶಾಸಕರ ಅಂತಿಮ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಯಿದ್ದು, ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕ


Maruti Suzuki: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳು ದುಬಾರಿ! ಯಾವುದಕ್ಕೆ ಎಷ್ಟು ಗೊತ್ತಾ?
ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ. ನವದೆಹಲಿ: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿಯಾಗಲಿದೆ. ಹಣದುಬ್ಬರ ಒತ್ತಡ ಮತ್ತು ಹೆಚ್ಚಿದ ನಿರ್ವಹಣಾ ವೆಚ್ಚದ ಕಾರಣಗಳನ್ನು ಉಲ್ಲೇಖಿಸಿ, ಜೂನ್ 2026 ರಿಂದ ತನ್ನ ಎಲ್ಲಾ ಮಾದರಿಗಳ ವಾಹನಗಳ ಬೆಲೆಯನ್ನು ರೂ 30,000 ವರೆಗೆ ಹೆಚ್ಚಿಸುವುದಾಗಿ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಇಂಡಿಯಾ ಗುರುವಾರ ತಿಳಿಸಿದೆ. ಜೂನ್ 2026 ರಿಂದ ಜಾರಿಗೆ ಬರುವಂತೆ ಕಂಪನಿಯು ತನ್ನ


"ಭಾರತಕ್ಕೆ ಎಷ್ಟು ಬೇಕೋ ಅಷ್ಟು ತೈಲ ಮಾರಾಟಕ್ಕೆ ನಾವು ಸಿದ್ಧ": ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ
ಭಾರತವು ಅಗಾಧವಾದ ಆರ್ಥಿಕ ಸಾಮರ್ಥ್ಯವನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಕೋಟ್ಯಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ. ಈ ಬೆಳವಣಿಗೆಯಲ್ಲಿ ಅಮೆರಿಕಾ ಭಾಗಿಯಾಗಲು ಹೆಚ್ಚು ಆಸಕ್ತಿ ಹೊಂದಿದೆ. ವಾಷಿಂಗ್ಟನ್: ಭಾರತಕ್ಕೆ ಎಷ್ಟು ಪ್ರಮಾಣದ ಇಂಧನ ಬೇಕಿದ್ದರೂ ಅಷ್ಟನ್ನೂ ಮಾರಾಟ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಅವರು ತಿಳಿಸಿದ್ದಾರೆ. ನಾಳೆಯಿಂದ (ಮೇ 23) ಆರಂಭವಾಗಲಿರುವ ತಮ್ಮ ಚೊಚ್ಚಲ ನಾಲ್ಕು ದಿನಗಳ ಭಾರತ ಪ್ರವಾಸಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಭಾರತ ಎಷ್ಟು


IPL 2026: ನಾಯಕ ರುತುರಾಜ್ ಗಾಯಕ್ವಾಡ್ ವಿರುದ್ಧ ಮುಗಿಬಿದ್ದ CSK ಅಭಿಮಾನಿಗಳು; ಬೆಂಬಲಕ್ಕೆ ನಿಂತ ಆರ್ ಅಶ್ವಿನ್!
ಈ ಆವೃತ್ತಿಯಲ್ಲಿ ರುತುರಾಜ್ ಅತ್ಯುತ್ತಮ ಪ್ರದರ್ಶನ ನೀಡಲಿಲ್ಲ. ಸಿಎಸ್ಕೆ ನಾಯಕ 123.44 ಸ್ಟ್ರೈಕ್ ರೇಟ್ ಮತ್ತು 28.08ರ ಸರಾಸರಿಯಲ್ಲಿ 337 ರನ್ಗಳೊಂದಿಗೆ ಆವೃತ್ತಿಯನ್ನು ಮುಗಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಪ್ಲೇ-ಆಫ್ ಅರ್ಹತೆಯನ್ನು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಕಳೆದುಕೊಂಡಿದ್ದು, ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಲೀಗ್ ಹಂತದಲ್ಲಿ ಸತತ ಮೂರು ಸೋಲುಗಳಿಂದ ಸಿಎಸ್ಕೆ ಟೂರ್ನಿಯಿಂದಲೇ ಹೊರಬಿದ್ದಿದೆ. ಇಡೀ ತಂಡವು ಒಂದು ಘಟಕವಾಗಿ ಉತ್ತಮ ಪ್ರದರ್ಶನ ನೀಡಲು ವಿಫಲವಾದರೂ, ಹೆಚ್ಚು ಟೀಕೆಗಳನ್ನು ಎದುರಿಸಿದ ವ್


'ಕೈ' ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಸೋಲು ಖಚಿತ: ರಾಧಾ ಮೋಹನ್ ದಾಸ್ ಅಗರ್ವಾಲ್
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ, ಖರ್ಗೆ ಸೇರಿ ಮೂವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ, ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗುರುವಾರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವ


ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು
2000 ರ ಸೆಕ್ಷನ್ 69A ಅಡಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ಸ್ಥಗಿತಗೊಳಿಸಲು X ಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಕಳೆದ ವಾರ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ತಡೆಹಿಡಿಯಲಾಗಿತ್ತು. ಇದಕ್ಕೆ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಕೇಂದ್ರ ಸರ್ಕಾರ ಆರೋಪಿಸಿದ ನಂತರ ಎಕ್ಸ್ ಖಾತೆಯನ್ನು ಗುರುವಾರ ಸ್ಥಗಿ


ನಟನೆ ಆಗಿ ಬರುವುದಿಲ್ಲ ಎಂದು ತ್ವಿಶಾ ಶರ್ಮಾ ಭಾವಿಸಿದ್ದರು, ಓದಲು ಬಯಸಿದ್ದರು: ಸಹ ನಟ ದೀಕ್ಷಿತ್ ಶೆಟ್ಟಿ
ಕಾರ್ಪೊರೇಟ್ ಜಗತ್ತಿಗೆ ಪ್ರವೇಶಿಸುವ ಮೊದಲು ತ್ವಿಶಾ ತೆಲುಗು ಚಿತ್ರ 'ಮುಗ್ಗುರು ಮೊನಗಲ್ಲು' (2021) ಮತ್ತು ಹಿಂದಿ ಚಿತ್ರ 'ಜರಾ ಸಂಭಾಲ್ ಕೇ' (2018) ನಲ್ಲಿ ಕೆಲಸ ಮಾಡಿದ್ದರು. ನೋಯ್ಡಾದ 33 ವರ್ಷದ ಮಹಿಳೆ ತ್ವಿಶಾ ಶರ್ಮಾ, ಮೇ 12ರಂದು ಭೋಪಾಲ್ನ ಕಟಾರಾ ಹಿಲ್ಸ್ ಪ್ರದೇಶದಲ್ಲಿರುವ ತನ್ನ ಪತಿ ವಕೀಲ ಸಮರ್ಥ್ ಸಿಂಗ್ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪತಿ ಮತ್ತು ಅವರ ತಾಯಿ ನಿವೃತ್ತ ನ್ಯಾಯಾಧೀಶೆಯಾಗಿರುವ ಗಿರಿಬಾಲಾ ಸಿಂಗ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವನ್ನು ದಾಖಲಿಸಿದ್ದಾರೆ. ಈಮಧ್ಯೆ, ಸಮರ್ಥ್ ಸಿಂಗ್ ಪರವಾಗಿ ಸ


ಹಿಂದೂ ಮಹಾಸಾಗರದಲ್ಲಿ ಇರಾನ್ 'ತೈಲ ಟ್ಯಾಂಕರ್' ವಶಕ್ಕೆ ಪಡೆದ ಅಮೆರಿಕ!
ಈ ವಾರದ ಆರಂಭದಲ್ಲಿ ಮಲಾಕ್ಕಾ ಜಲಸಂಧಿಯನ್ನು ದಾಟಿದ ನಂತರ ಹಡಗು ಮಲೇಷ್ಯಾದ ಪಶ್ಚಿಮಕ್ಕೆ ಚಲಿಸುತ್ತಿದೆ ಎಂದು ಟ್ರ್ಯಾಕಿಂಗ್ ಡೇಟಾ ತೋರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರಂತರ ಮಿಲಿಟರಿ ದಾಳಿ ಬೆದರಿಕೆಗಳ ನಡುವೆ ಹಿಂದೂ ಮಹಾಸಾಗರದಲ್ಲಿ ಇರಾನ್ಗೆ ಸೇರಿದ ತೈಲ ಟ್ಯಾಂಕರ್ ಅನ್ನು ಅಮೆರಿಕ ವಶಪಡಿಸಿಕೊಂಡಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಇರಾನ್ ಮಂಜೂರು ಮಾಡಿದ ಸ್ಕೈವೇವ್ ಹಡಗು ಕಚ್ಚಾ ತೈಲವನ್ನು ಸಾಗಿಸುತ್ತಿತ್ತು ಎಂದು ಗುರುತಿಸಿದ ನಂತರ ರಾತ್ರೋರಾತ್ರಿ ಬಂಧಿಸಲಾಗಿದೆ ಎಂದು ಮೂವರು ಅಮೆರಿಕದ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ವಾಲ್ ಸ್ಟ್ರೀಟ್ ಜರ್ನಲ


ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?
ಕೆಲವೇ ಬ್ಯಾಟ್ಸ್ಮನ್ಗಳು ಕವರ್ನಲ್ಲಿ ಅಷ್ಟು ಸುಲಭವಾಗಿ ಸಿಕ್ಸರ್ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಅದರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ದಿಗ್ವೇಶ್ ರಾಥಿ ಬೌಲಿಂಗ್ ನಲ್ಲಿ ಬಾರಿಸಿದ ಸಿಕ್ಸರ್ ಇದಕ್ಕೆ ಸಾಕ್ಷಿ. ಬೆಂಗಳೂರು: 15 ವರ್ಷದ ಹದಿಹರೆಯದ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಅವರ ಐಪಿಎಲ್ ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ. ವೈಭವ್ ಸೂರ್ಯವಂಶಿ ಅವರ ಸಾಮರ್ಥ್ಯ ಮತ್ತು ಮನೋಧರ್ಮ ಅವರನ್ನು ಇ


ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ
ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಮುಖವಾಗಿ, ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹಾರ ಎಕ್ಕುಟ್ಟಿ ಹೋಗಲಿ. ಆದರೆ ಮೆಲೋನಿ ಅವರಿಗೆ ಮೆಲೋಡಿ ನೀಡುವುದು ತಡವಾಗಬಾರದು ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ


ಬಂಗಾಳದಲ್ಲಿ ಕೇವಲ ಹಿಂದೂ ಮತಗಳಿಂದ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಹೇಳಿದ್ದೇನು?
ಗುಪ್ತಾ ಅವರು ಬುಧವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 15 ವರ್ಷಗಳ ಅಧಿಕಾರದ ನಂತರ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಪದಚ್ಯುತಗೊಳಿಸುವಲ್ಲಿ ಹಿಂದೂ ಮತಗಳ ಕ್ರೋಢೀಕರಣವು ಪ್ರಮುಖ ಪಾತ್ರ ವಹಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. "ಭಯದ ವಾತಾವರಣ" ಸೃಷ್ಟಿಸಿದ ಟಿಎಂಸಿಯ ವರ್ಷಗಳ "ದುರಾಡಳಿತ", ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ಅಮಿತ್ ಶಾ ಹಾಗೂ ಆರ್ಎಸ್ಎಸ್ನ ಸಂಘಟನಾ ಸಾಮರ್ಥ್ಯಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವು ಎಂದು ಭಾರತದ ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಅವರು ಹೇಳಿದ್ದಾರೆ. ಆಕ್ಸಿಸ್ ಮೈ ಇಂಡಿಯಾವನ್ನು ಮುನ್ನಡೆ


ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು... ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ cmಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ


ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ
ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ. ನವದೆಹಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ. ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತ


ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮೂಲಗಳು ಇದನ್ನು ಮಹತ್ವದ ಯುದ್ಧ-ಸಮರ್ಥ ಪಡೆ ಎಂದು ವಿವರ


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ

